27 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯ ವಾರ್ಷಿಕ ಮಹಾಸಭೆಯಲ್ಲಿ 2026-2027ನೇ ಸಾಲಿಗೆ ಸರ್ವಾನುಮತದಿಂದ ಆಯ್ಕೆಯಾದ ನೂತನ ಟ್ರಸ್ಟಿಗಳಾದ ಜೈಸನ್ ಮ್ಯಾಲಿಲ್, ಕುರಿಯನ್ ಕಿಯಕ್ಕೆಲ್, ರಾಜೇಶ್ ತೆಕ್ಕನಾಟ್ಟ್ ಹಾಗೂ ಸೇಬಾಸ್ಟಿಯನ್ ವಲಿಯಪರಂಭಿಲ್ ಅವರು ಪದಗ್ರಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪುಣ್ಯ ಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು ನೂತನ ಟ್ರಸ್ಟಿಗಳಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಟ್ರಸ್ಟಿಗಳು ನಿಷ್ಕಾಮ ಸೇವಾ ಮನೋಭಾವದಿಂದ ಸಮಾಜಮುಖಿ ಹಾಗೂ ಜನಾನುರಾಗಿ ಕಾರ್ಯಗಳನ್ನು ಕೈಗೊಂಡು, ಪುಣ್ಯ ಕ್ಷೇತ್ರದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ತಮ್ಮ ಅಮೂಲ್ಯ ಕೊಡುಗೆಯನ್ನು ನೀಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹಾಗೂ ಧರ್ಮ ಕೇಂದ್ರದ ಸದಸ್ಯರು ಉಪಸ್ಥಿತರಿದ್ದು, ನೂತನ ಟ್ರಸ್ಟಿಗಳಿಗೆ ಶುಭಾಶಯಗಳನ್ನು ಕೋರಿದರು.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya
error: Content is protected !!