July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ತಣ್ಣೀರುಪಂತ : ಸರ್ಕಾರದ ಆದೇಶದಂತೆ ವಿಶ್ವ ಪರಿಸರ ದಿನಾಚರಣೆ ಹಾಗೂ “ಸ್ವಚ್ಛ ಗ್ರಾಮ, ಸುರಕ್ಷಿತ ಹವಾಮಾನ” ವಿಶೇಷ ಅಭಿಯಾನವನ್ನು ಮಹಾತ್ಮ ಗಾಂಧಿ ತಣ್ಣೀರುಪಂತ ಗ್ರಾಮ ಪಂಚಾಯತ್, ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ವತಿಯಿಂದ ಸರಕಾರಿ ಪ್ರೌಢಶಾಲೆ ಕರಾಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಅರಣ್ಯ ಇಲಾಖೆಯಿಂದ ಪಡೆದುಕೊಂಡ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ, ಕರಾಯ ಶಾಲೆ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಕಾರ್ಯದರ್ಶಿ, ಅಂಗನವಾಡಿ ಕಾರ್ಯಕರ್ತೆಯರು, ತುರ್ಕಳಿಕೆ ಶಾಲಾ ಮುಖ್ಯೋಪಾಧ್ಯಾಯರು , ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!