25.4 C
ಪುತ್ತೂರು, ಬೆಳ್ತಂಗಡಿ
September 11, 2026
Uncategorized

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 12 ವರ್ಷಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೇಶದ ಅಭಿವೃದ್ಧಿ, ಜನಪರ ಯೋಜನೆಗಳು ಹಾಗೂ ರಾಷ್ಟ್ರದ ಸಮಗ್ರ ಪ್ರಗತಿಗೆ ಕಾರಣವಾದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಸ್ಮರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಅರಸಿನಮಕ್ಕಿ, ಶಕ್ತಿ ಕೇಂದ್ರ ಪ್ರಮುಖ ಜಯಪ್ರಸಾದ್, ಅರ್ಚಕರಾದ ವೃಷಾಂಕ್ ಖಾಡಿಲ್ಕರ್ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮಯ ಬಾರಿಗ ಉಪಸ್ಥಿತರಿದ್ದರು. ಪೂಜೆಯ ಬಳಿಕ ದೇಶದ ಸುಭಿಕ್ಷತೆ, ಅಭಿವೃದ್ಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya
error: Content is protected !!