July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ಆಯ್ಕೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮಾದರಿಯಲ್ಲಿ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳು ಮತಪತ್ರಗಳ ಮೂಲಕ ತಮ್ಮ ಶಾಲಾ ನಾಯಕರು ಹಾಗೂ ಮಂತ್ರಿಮಂಡಲದ ಸದಸ್ಯರನ್ನು ಆಯ್ಕೆ ಮಾಡಿದರು.
ಶಾಲಾ ನಾಯಕಿಯಾಗಿ ಸಂಜನಾ ಎಸ್ ಉಪ ನಾಯಕಿಯಾಗಿ ಶ್ರುತಾ ಆಯ್ಕೆಯಾಗಿರುತ್ತಾರೆ.


ಈ ಚುನಾವಣಾ ಪ್ರಕ್ರಿಯೆಯನ್ನು ಶಾಲೆಯ ಮತದಾರರ ಸಾಕ್ಷರತಾ ಸಂಘದ ವತಿಯಿಂದ ಸುಸೂತ್ರವಾಗಿ ನಡೆಸಲಾಯಿತು. ಸಂಘದ ಸಂಯೋಜಕರಾದ ಶ್ರೀಮತಿ ಕಸ್ತೂರಿ ಎಸ್., ಶಿಕ್ಷಕರಾದ ಮುರಳಿ ಪಿ. ಹಾಗೂ ಶ್ರೀಮತಿ ನೀತಾ ಕೆ.ಎಸ್. ಅವರ ನೇತೃತ್ವದಲ್ಲಿ ಮತದಾನ ಮತ್ತು ಮತ ಎಣಿಕೆ ಕಾರ್ಯಗಳು ಯಶಸ್ವಿಯಾಗಿ ನೆರವೇರಿದವು.

ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!