26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯ ದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ ಇವರ ವತಿಯಿಂದ ಜೂ.14 ರಂದು ಅಳದಂಗಡಿಯಲ್ಲಿ‌ ನಡೆಯುವ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಭಾರತೀಯ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಮುಖ್ಯ ಅತಿಥಿಯಾಗಿ ಆಗಮಿಸುವ ಹಿನ್ನೆಲೆಯಲ್ಲಿ ತಾಲೂಕು ಕಬಡ್ಡಿ ಅಸೋಸಿಯೇಷನ್ ಜೊತೆಗೆ ಸಮಾಲೋಚನಾ ಸಭೆಯು ಬೆಳ್ತಂಗಡಿಯಲ್ಲಿ ಜೂ.10 ರಂದು ನಡೆಯಿತು.

ಅಧ್ಯಕ್ಷತೆ ಮತ್ತು ವಿಷಯ ಮಂಡನೆಯನ್ನು ಅಳದಂಗಡಿ ಶ್ರೀ ಸತ್ಯ ದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ ಇದರ ಆಡಳಿತದಾರ ಶಿವಪ್ರಸಾದ ಅಜಿಲ ನಡೆಸಿದರು.

ಸಭೆಯಲ್ಲಿ ತಾಲೂಕು ಕಬಡ್ಡಿ‌ ಅಸೋಸಿಯೇಷನ್ ಅಧ್ಯಕ್ಷ ರಂಜನ್ ಜಿ ಗೌಡ, ಜಿಲ್ಲಾ ಉಪಾಧ್ಯಕ್ಷರುಗಳಾದ ಹೇರಾಜೆ ಪೀತಾಂಬರ ಬಂಗೇರ ಮತ್ತು ನಾಮದೇವ ರಾವ್ ಮುಂಡಾಜೆ, ಜಿಲ್ಲಾ ಗೌರವ ಸಲಹೆಗಾರ ಹಾಗೂ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್ ಮುಂಡಾಜೆ, ಕಾರ್ಯಾಧ್ಯಕ್ಷ ರಾಜಶೇಖರ ಶೆಟ್ಟಿ ಮಡಂತ್ಯಾರು, ಉಪಾಧ್ಯಕ್ಷ ವಿಜಯ ಗೌಡ ವೇಣೂರು, ತಾ. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಹಟ್ಟತ್ತೋಡಿ, ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಪ್ರಭಾಕರ ನಾರಾವಿ, ಕಬಡ್ಡಿ ಸಂಘಟಕರಾದ ಸದಾಶಿವ ಅರ್ವ ಮತ್ತು ಮಧುಸೂಧನ ಸುವರ್ಣ, ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಉಪಸ್ಥಿತರಿದ್ದರು.

ಪವನ್ ಶೆಹ್ರಾವತ್ ಅವರಿಗೆ ಭವ್ಯ ಸ್ವಾಗತ ಹಾಗೂ ಮೆರವಣಿಗೆ, ಅಸೋಸಿಯೇಷನ್ ಕಡೆಯಿಂದ ಗೌರವಾರ್ಪಣೆ ಇತ್ಯಾದಿ ವಿಷಯ ಚರ್ಚಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

Related posts

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya
error: Content is protected !!