August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

ಬೆಳ್ತಂಗಡಿ: ಕ್ರಾಂತಿವೀರ ಉಪ್ಪಿನಂಗಡಿ ಮಂಜ ಬೈದ್ಯರ ಸಮಗ್ರ ಹೋರಾಟ, ಬಲಿದಾನದ ವಿವರವನ್ನು ಒಳಗೊಂಡ ‘ಕ್ರಾಂತಿ ವೀರ ಮಂಜ ಬೈದ್ಯ’ ಪುಸ್ತಕವನ್ನು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಬಿಡುಗಡೆ ಗೊಳಿಸಿದರು.

ಕ್ರಾಂತಿವೀರ ಮಂಜ ಬೈದ್ಯರ ಕಥೆ ಬರಿಯ ಇತಿಹಾಸ ಮಾತ್ರವಲ್ಲ, ಅದು ಯುವ ಸಮುದಾಯದ ಭವಿಷ್ಯದ ದೃಷ್ಟಿಯಿಂದ ರಾಷ್ಟ್ರೀಯ ಪ್ರಜ್ಞೆಯೂ ಹೌದು. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ವೀರ ಯೋಧರ ಪುತ್ಥಳಿ ನಿರ್ಮಿಸಲು ಯೋಜನೆ ಹಮ್ಮಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗೌರವ ಸಲಹೆಗಾರ ಭುಜಬಲಿ ಧರ್ಮಸ್ಥಳ, ಸಂಚಾಲಕರಾದ ಬಾಲಕೃಷ್ಣ ಶೆಟ್ಟಿ, ಶಶಿಧರ ಕಲ್ಮoಜ, ಎಂ.ಕೆ. ಸಮಿತಿ ಸದಸ್ಯರುಗಳಾದ ಪ್ರಸಾದ್, ಗುರುರಾಜ ಗುರಿಪಲ್ಲ , ರಮೇಶ್ ಧರ್ಮಸ್ಥಳ, ಪುರುಷೋತ್ತಮ ಧರ್ಮಸ್ಥಳ, ಸುನಿಲ್ ಕನ್ಯಾಡಿ ,ರಾಘವೇಂದ್ರ ಗೌಡ, ರವೀಂದ್ರ ಅರಳಪದವು ,ಗುರು ಪ್ರಸಾದ್ ಉಜಿರೆ,ರೂಪೇಶ ಧರ್ಮಸ್ಥಳ, ಉಪಸ್ಥಿತರಿದ್ದರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya
error: Content is protected !!