25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರದ ಜವಾಬ್ದಾರಿ ವಹಿಸಿಕೊಂಡಿರುವುದು ರಾಜ್ಯದ ರಾಜಕೀಯ ಜೀವನದಲ್ಲಿ ಮಹತ್ವದ ಘಟ್ಟವಾಗಿದೆ.

ಒಬ್ಬ ವಕೀಲನಾಗಿ, ಸಂವಿಧಾನಬದ್ಧ ಮತ್ತು ಪಾರದರ್ಶಕ ಆಡಳಿತವನ್ನು; ಒಬ್ಬ ಕಾರ್ಮಿಕ ನಾಯಕನಾಗಿ, ಕಾರ್ಮಿಕರು, ರೈತರು, ಯುವಕರು ಮತ್ತು ಶ್ರಮಜೀವಿಗಳ ಹಿತಾಸಕ್ತಿಗೆ ಆದ್ಯತೆ ನೀಡುವ ಆಡಳಿತವನ್ನು ನಾನು ನಿರೀಕ್ಷಿಸುತ್ತೇನೆ.

ಇಂದಿನ ಕರ್ನಾಟಕಕ್ಕೆ ಅಗತ್ಯವಿರುವುದು ವೇಗವಾದ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಹೂಡಿಕೆ ಸ್ನೇಹಿ ವಾತಾವರಣ ಹಾಗೂ ಎಲ್ಲ ಪ್ರದೇಶಗಳ ಸಮಾನ ಬೆಳವಣಿಗೆ. ಜನರ ವಿಶ್ವಾಸಕ್ಕೆ ತಕ್ಕಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ನೂತನ ಸರ್ಕಾರ ಕಾರ್ಯನಿರ್ವಹಿಸಲಿ ಎಂಬುದು ನನ್ನ ಆಶಯ.

“ಅಧಿಕಾರವು ಹುದ್ದೆಯಿಂದ ಸಿಗುತ್ತದೆ; ನಾಯಕತ್ವವು ಜನರ ವಿಶ್ವಾಸದಿಂದ ನಿರ್ಮಾಣವಾಗುತ್ತದೆ. ಆ ವಿಶ್ವಾಸವನ್ನು ಅಭಿವೃದ್ಧಿಯ ಶಕ್ತಿಯನ್ನಾಗಿ ಪರಿವರ್ತಿಸುವ ಜವಾಬ್ದಾರಿ ಇಂದು ನೂತನ ಮುಖ್ಯಮಂತ್ರಿಗಳ ಮೇಲಿದೆ.” ಎಂದು ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ವಕೀಲರು ಅನಿಲ್ ಕುಮಾರ್ ಯು ತಿಳಿಸಿದರು.

Related posts

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!