26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರದ ಜವಾಬ್ದಾರಿ ವಹಿಸಿಕೊಂಡಿರುವುದು ರಾಜ್ಯದ ರಾಜಕೀಯ ಜೀವನದಲ್ಲಿ ಮಹತ್ವದ ಘಟ್ಟವಾಗಿದೆ.

ಒಬ್ಬ ವಕೀಲನಾಗಿ, ಸಂವಿಧಾನಬದ್ಧ ಮತ್ತು ಪಾರದರ್ಶಕ ಆಡಳಿತವನ್ನು; ಒಬ್ಬ ಕಾರ್ಮಿಕ ನಾಯಕನಾಗಿ, ಕಾರ್ಮಿಕರು, ರೈತರು, ಯುವಕರು ಮತ್ತು ಶ್ರಮಜೀವಿಗಳ ಹಿತಾಸಕ್ತಿಗೆ ಆದ್ಯತೆ ನೀಡುವ ಆಡಳಿತವನ್ನು ನಾನು ನಿರೀಕ್ಷಿಸುತ್ತೇನೆ.

ಇಂದಿನ ಕರ್ನಾಟಕಕ್ಕೆ ಅಗತ್ಯವಿರುವುದು ವೇಗವಾದ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಹೂಡಿಕೆ ಸ್ನೇಹಿ ವಾತಾವರಣ ಹಾಗೂ ಎಲ್ಲ ಪ್ರದೇಶಗಳ ಸಮಾನ ಬೆಳವಣಿಗೆ. ಜನರ ವಿಶ್ವಾಸಕ್ಕೆ ತಕ್ಕಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ನೂತನ ಸರ್ಕಾರ ಕಾರ್ಯನಿರ್ವಹಿಸಲಿ ಎಂಬುದು ನನ್ನ ಆಶಯ.

“ಅಧಿಕಾರವು ಹುದ್ದೆಯಿಂದ ಸಿಗುತ್ತದೆ; ನಾಯಕತ್ವವು ಜನರ ವಿಶ್ವಾಸದಿಂದ ನಿರ್ಮಾಣವಾಗುತ್ತದೆ. ಆ ವಿಶ್ವಾಸವನ್ನು ಅಭಿವೃದ್ಧಿಯ ಶಕ್ತಿಯನ್ನಾಗಿ ಪರಿವರ್ತಿಸುವ ಜವಾಬ್ದಾರಿ ಇಂದು ನೂತನ ಮುಖ್ಯಮಂತ್ರಿಗಳ ಮೇಲಿದೆ.” ಎಂದು ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ವಕೀಲರು ಅನಿಲ್ ಕುಮಾರ್ ಯು ತಿಳಿಸಿದರು.

Related posts

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya
error: Content is protected !!