ನಾವೂರು: ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ 2026- 27 ನೇ ಸಾಲಿನ ಶೈಕ್ಷಣಿಕ ವರ್ಷದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.10ರಂದು ದೇವಸ್ಥಾನ ಸನ್ನಿಧಿಯಲ್ಲಿ ನಡೆಯಿತು.
ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ದೀಪ ಬೆಳಗಿಸಿ ಶುಭ ಹಾರೈಸಿದರು. ಗೌರವ ಉಪಸ್ಥಿತಿಯಾಗಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ.ಬಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲಿಯಾನ್, ಮಾಜಿ ಅಧ್ಯಕ್ಷ ಎ.ಬಿ. ಉಮೇಶ್ ಆತ್ಯಡ್ಕ, ಪ್ರಧಾನ ಕಾರ್ಯದರ್ಶಿ ಧರ್ಣಪ್ಪ ಮೂಲ್ಯ, ಜಾತ್ರಾ ಮಹೋತ್ಸವದ ಅಧ್ಯಕ್ಷ ಡಾ. ಪ್ರದೀಪ್, ಗೀತಾ ಗ್ರಾಮ ಅನುಷ್ಠಾನ ಸಮಿತಿಯ ಸಂಚಾಲಕರಾದ ಮೋಹನ್ ಬಂಗೇರ, ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಶಿಕ್ಷಕರಾದ ಸತೀಶ್ ಸಾಲಿಯಾನ್, ಅರ್ಚಕರಾದ ದಿನೇಶ್ ಭಟ್ ಉಪಸ್ಥಿತರಿದ್ದರು.
130 ಮಕ್ಕಳು ಭಗವತಿ ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.













