ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 12 ವರ್ಷಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ದೇಶದ ಅಭಿವೃದ್ಧಿ, ಜನಪರ ಯೋಜನೆಗಳು ಹಾಗೂ ರಾಷ್ಟ್ರದ ಸಮಗ್ರ ಪ್ರಗತಿಗೆ ಕಾರಣವಾದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಸ್ಮರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಅರಸಿನಮಕ್ಕಿ, ಶಕ್ತಿ ಕೇಂದ್ರ ಪ್ರಮುಖ ಜಯಪ್ರಸಾದ್, ಅರ್ಚಕರಾದ ವೃಷಾಂಕ್ ಖಾಡಿಲ್ಕರ್ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮಯ ಬಾರಿಗ ಉಪಸ್ಥಿತರಿದ್ದರು. ಪೂಜೆಯ ಬಳಿಕ ದೇಶದ ಸುಭಿಕ್ಷತೆ, ಅಭಿವೃದ್ಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.












