ಲಾಯಿಲ: ಪ್ರಧಾನಿ ನರೇಂದ್ರ ಮೋದಿಜೀ ಯವರು ದೇಶದ ಪ್ರಧಾನಿಯಾಗಿ ಸಾರ್ಥಕ 12 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರಿಗೆ ದೇಶಸೇವೆ ಮಾಡಲು ಇನಷ್ಟು ಶಕ್ತಿಯನ್ನು ನೀಡಲೆಂದು ಲಾಯಿಲ ಶಕ್ತಿಕೇಂದ್ರ ವತಿಯಿಂದ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು.
ಈ ಸಂದರ್ಭ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಭೈರ, ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್ ಲಾಯಿಲ, ಶಕ್ತಿ ಕೇಂದ್ರ ಅಧ್ಯಕ್ಷ ಗಣೇಶ್ ಕನ್ನಾಜೆ, ಯುವಮೋರ್ಚಾ ಕಾರ್ಯದರ್ಶಿ ಜಗದೀಶ್ ಕನ್ನಾಜೆ, ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯ ಸುಧಾಕರ್ ಬಿ.ಎಲ್, ಹಿರಿಯರಾದ ರುಕ್ಮಯ ಕನ್ನಾಜೆ, ಚಂದ್ರಕಾಂತ್ ಪಡ್ಲಾಡಿ ಉಪಸ್ಥಿತರಿದ್ದರು.













