July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಒರಿಸ್ಸಾ ರಾಜ್ಯದ ಸಹಕಾರಿ ಪ್ರತಿನಿಧಿಗಳ ಭೇಟಿ

ಇಂದಬೆಟ್ಟು: ಸಹಕಾರ ರಂಗದಲ್ಲಿ ಸದಸ್ಯರು ಹಾಗೂ ಗ್ರಾಹಕರಿಗೆ ವಿಶಿಷ್ಟ ರೀತಿಯ ಸೇವೆ ನೀಡುತ್ತಿರುವ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು ರಾಜ್ಯಕ್ಕೆ ಮಾದರಿ ಸಹಕಾರಿ ಸಂಘವಾಗಿದ್ದು,ಇದರ ಕಾರ್ಯಚಟುವಟಿಕೆಗಳ ಅಧ್ಯಯನ ನಡೆಸಲು ಒರಿಸ್ಸಾ ರಾಜ್ಯದ ಸುಂದರ್‌ಗಾಡ್ ಜಿಲ್ಲೆಯ ಪ್ಯಾಕ್ಸ್ ಹಾಗೂ ಲ್ಯಾಂಪ್ ಸೊಸೈಟಿಗಳ ಪ್ರತಿನಿಧಿಗಳ ತಂಡದ 25 ಮಂದಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷರುಗಳು ಜೂ.10 ರಂದು ಸಂಘದ ಕಿಲ್ಲೂರು ಹಾಗೂ ಕಡಿರುದ್ಯಾವರ ಶಾಖೆಗೆ ಬೇಟಿ ನೀಡಿತು.

ನಬಾರ್ಡ್ ಸಂಸ್ಥೆಯಿಂದ ಸಾಲ ಪಡೆದು ನಿರ್ಮಾಣವಾದ ಎರಡು ಶಾಖೆಗಳ ಪೂರಕ ಮಾಹಿತಿಯನ್ನು ಒದಗಿಸಲಾಯಿತು. ಸಂಘದ ಕಾರ್ಯನಿರ್ವಹಣೆ, ಸಾಲ ವಿತರಣೆ ವ್ಯವಸ್ಥೆ, ಮಾರಟ ಜೋಡನೆ ವ್ಯವಸ್ಥೆಯ ಮಾಹಿತಿಯನ್ನು ಬೇಟಿ ನೀಡಿದ ತಂಡವು ಪಡೆದುಕೊಂಡಿತು.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು1250 ಕೋಟಿ ವ್ಯವಹಾರವನ್ನು ನಡೆಸಿ, 6402 ಸದಸ್ಯರನ್ನು ಹೊಂದಿ,ರೂ 210 ಕೋಟಿಗೂ ಮಿಕ್ಕಿ ಸಾಲ ನೀಡಲಾಗಿದ್ದು, ಇದರಲ್ಲಿ 44 ಕೋಟಿಗೂ ಮಿಕ್ಕಿ ಬೆಳೆ ಸಾಲಗಳನ್ನು ವಿತರಿಸಲಾಗಿದೆ. ಸಂಘವು 2025-26 ಸಾಲಿನಲ್ಲಿ 5 ಕೋಟಿ ಮಿಕ್ಕಿ ನಿವ್ವಳ ಲಾಭ ಗಳಿಸಿದೆ. ಸಂಘವು ಪೂರ್ಣ ಪ್ರಮಾಣದ ಎಂಟು ಶಾಖೆಗಳನ್ನು ಹೊಂದಿದ್ದು, ಪತ್ತು ಮತ್ತು ಪತ್ತೇತರ ವ್ಯವಹಾರಗಳನ್ನು ನಡೆಸುತ್ತಿದೆ. ಈ ಎಲ್ಲಾ ವ್ಯವಹಾರಗಳ ಯಶಸ್ವಿ ಅನುಷ್ಟಾನದಿಂದ ನಬಾರ್ಡಿನ ಗಮನ ಸೆಳೆದಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮತ್ತು ನಬರ್ಡ್ ಸಂಸ್ಥೆಯ ಡಿ.ಜಿ.ಎಂ ಪ್ರತಾಪ್ ಇ ಹಾಗೂ ಉಪಾಧ್ಯಕ್ಷ ಆನಂದ ಗೌಡ. ನಿರ್ದೇಶಕ ವಿನಯಚಂದ್ರ ಗೌಡ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ , ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡ, ಸಂಘದ ಸಿಬ್ಬ೦ದಿಗಳು ಉಪಸ್ಥಿತರಿದ್ದರು.

Related posts

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya
error: Content is protected !!