30.9 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ನಡ ಗ್ರಾಮ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ, ಉದ್ಯಮಿ‌ ಹಾಗೂ ಸಮಾಜ ಸೇವಕ ಸುಜಿತ್ ಪ್ರಭು ಕನ್ಯಾಡಿ ನೇತೃತ್ವದ “ಬೆಳಕು ಚಾರಿಟೇಬಲ್ ಟ್ರಸ್ಟ್ ಬೆಳ್ತಂಗಡಿ” ವತಿಯಿಂದ ಉಚಿತ ಪುಸ್ತಕ ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಯಶೋಧಾ ವಹಿಸಿದ್ದರು.
ಬೆಳಕು ಚಾರಿಟೇಬಲ್ ಟ್ರಸ್ಟ್ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಪುಸ್ತಕ ವಿತರಿಸಿ ಮಕ್ಕಳಿಗೆ ಹಿತನುಡಿಗಳನ್ನಾಡಿದರು.

ಶಾಲಾ ಸಹ ಶಿಕ್ಷಕಿ ರಶ್ಮಿ ಕಿಶೋರ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್ ವಿಷಯ ಪ್ರಸ್ತಾವನೆಗೈದು‌ ಸ್ವಾಗತಿಸಿದರು.
ಬೆಳಕು‌ ಚಾರಿಟೇಬಲ್ ಟ್ರಸ್ಟ್ ವಿದ್ಯಾ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದು, ಸರಕಾರಿ ಶಾಲೆಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತಿದೆ. ಈ ಹಿಂದೆ ಕುಂಟಿನಿ, ಅತ್ತಾಜೆ, ನಡ, ಬೆಳ್ತಂಗಡಿ ಜೂನಿಯರ್ ಕಾಲೇಜು ಹಾಗೂ ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳ ವಿತರಣೆಯಲ್ಲದೆ ಉಣ್ಣಾಲು ಕಿ.‌ ಪ್ರಾಥಮಿಕ ಶಾಲೆ ಮತ್ತು ನಡ ಪ್ರೌಢ ಶಾಲೆಗೆ ಕಂಪ್ಯೂಟರ್ ಅನ್ನೂ ಕೊಡುಗೆಯಾಗಿ ನೀಡಿದೆ.

Related posts

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya
error: Content is protected !!