July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ನಡ ಗ್ರಾಮ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ, ಉದ್ಯಮಿ‌ ಹಾಗೂ ಸಮಾಜ ಸೇವಕ ಸುಜಿತ್ ಪ್ರಭು ಕನ್ಯಾಡಿ ನೇತೃತ್ವದ “ಬೆಳಕು ಚಾರಿಟೇಬಲ್ ಟ್ರಸ್ಟ್ ಬೆಳ್ತಂಗಡಿ” ವತಿಯಿಂದ ಉಚಿತ ಪುಸ್ತಕ ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಯಶೋಧಾ ವಹಿಸಿದ್ದರು.
ಬೆಳಕು ಚಾರಿಟೇಬಲ್ ಟ್ರಸ್ಟ್ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಪುಸ್ತಕ ವಿತರಿಸಿ ಮಕ್ಕಳಿಗೆ ಹಿತನುಡಿಗಳನ್ನಾಡಿದರು.

ಶಾಲಾ ಸಹ ಶಿಕ್ಷಕಿ ರಶ್ಮಿ ಕಿಶೋರ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್ ವಿಷಯ ಪ್ರಸ್ತಾವನೆಗೈದು‌ ಸ್ವಾಗತಿಸಿದರು.
ಬೆಳಕು‌ ಚಾರಿಟೇಬಲ್ ಟ್ರಸ್ಟ್ ವಿದ್ಯಾ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದು, ಸರಕಾರಿ ಶಾಲೆಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತಿದೆ. ಈ ಹಿಂದೆ ಕುಂಟಿನಿ, ಅತ್ತಾಜೆ, ನಡ, ಬೆಳ್ತಂಗಡಿ ಜೂನಿಯರ್ ಕಾಲೇಜು ಹಾಗೂ ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳ ವಿತರಣೆಯಲ್ಲದೆ ಉಣ್ಣಾಲು ಕಿ.‌ ಪ್ರಾಥಮಿಕ ಶಾಲೆ ಮತ್ತು ನಡ ಪ್ರೌಢ ಶಾಲೆಗೆ ಕಂಪ್ಯೂಟರ್ ಅನ್ನೂ ಕೊಡುಗೆಯಾಗಿ ನೀಡಿದೆ.

Related posts

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
error: Content is protected !!