July 26, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲುಗೆ ಸೇರಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ ೨೦೨೩ ರಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.೭ ರಂದು ದೂರು ನೀಡಿದ್ದರು.

ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮದ ಗ್ರಾಮೀಣ ಅಂಚೆ ವಿತರಕ ಆಗಿರುವ ವಿವಾಹಿತ ಸುರೇಶ್(೩೫) ಎಂಬಾತನನ್ನು ಕಳೆಂಜದಲ್ಲಿ ಜೂ.೮ ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ ಜೂ.೯ ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿ, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!