July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

ಧರ್ಮಸ್ಥಳ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ–ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ ಅವರು 625ಕ್ಕೆ625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಮಧುರಾ ದಂಪತಿಯ ಪುತ್ರಿಯಾಗಿದ್ದಾರೆ.

ಅವರ ಈ ಅಪೂರ್ವ ಸಾಧನೆಯನ್ನು ಅಭಿನಂದಿಸಿ, ಜೂನ್ 8ರಂದು ಧರ್ಮಸ್ಥಳ ಅನ್ನಪೂರ್ಣ ಛತ್ರದ ಹಿರಿಯ ಸಿಬ್ಬಂದಿಗಳಾದ ಭರತ್‌ರಾಜ್ ಜೈನ್, ಶ್ರೇಣಿಕ್ , ರಾಜು ಸಪಲ್ಯ , ದೇವಿಪ್ರಸಾದ್ , ಅಪ್ಪು ಬಿ , ಬಾಬು ಬಿ , ಉಮೇಶ ಯಂ , ಬಾಕಕೃಷ್ಣ ಶೆಟ್ಟಿಹಾಗೂ ಇತರ ಸಿಬ್ಬಂದಿಗಳು ಜಿ. ಮಾಧುರ್ಯ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಬ್ಬಂದಿಗಳು, ಮಾಧುರ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿ ಉನ್ನತ ಸಾಧನೆ ಮಾಡಿ ಕುಟುಂಬ, ಶಾಲೆ ಹಾಗೂ ಸಮಾಜಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

Related posts

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya
error: Content is protected !!