26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರದ ಜವಾಬ್ದಾರಿ ವಹಿಸಿಕೊಂಡಿರುವುದು ರಾಜ್ಯದ ರಾಜಕೀಯ ಜೀವನದಲ್ಲಿ ಮಹತ್ವದ ಘಟ್ಟವಾಗಿದೆ.

ಒಬ್ಬ ವಕೀಲನಾಗಿ, ಸಂವಿಧಾನಬದ್ಧ ಮತ್ತು ಪಾರದರ್ಶಕ ಆಡಳಿತವನ್ನು; ಒಬ್ಬ ಕಾರ್ಮಿಕ ನಾಯಕನಾಗಿ, ಕಾರ್ಮಿಕರು, ರೈತರು, ಯುವಕರು ಮತ್ತು ಶ್ರಮಜೀವಿಗಳ ಹಿತಾಸಕ್ತಿಗೆ ಆದ್ಯತೆ ನೀಡುವ ಆಡಳಿತವನ್ನು ನಾನು ನಿರೀಕ್ಷಿಸುತ್ತೇನೆ.

ಇಂದಿನ ಕರ್ನಾಟಕಕ್ಕೆ ಅಗತ್ಯವಿರುವುದು ವೇಗವಾದ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಹೂಡಿಕೆ ಸ್ನೇಹಿ ವಾತಾವರಣ ಹಾಗೂ ಎಲ್ಲ ಪ್ರದೇಶಗಳ ಸಮಾನ ಬೆಳವಣಿಗೆ. ಜನರ ವಿಶ್ವಾಸಕ್ಕೆ ತಕ್ಕಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ನೂತನ ಸರ್ಕಾರ ಕಾರ್ಯನಿರ್ವಹಿಸಲಿ ಎಂಬುದು ನನ್ನ ಆಶಯ.

“ಅಧಿಕಾರವು ಹುದ್ದೆಯಿಂದ ಸಿಗುತ್ತದೆ; ನಾಯಕತ್ವವು ಜನರ ವಿಶ್ವಾಸದಿಂದ ನಿರ್ಮಾಣವಾಗುತ್ತದೆ. ಆ ವಿಶ್ವಾಸವನ್ನು ಅಭಿವೃದ್ಧಿಯ ಶಕ್ತಿಯನ್ನಾಗಿ ಪರಿವರ್ತಿಸುವ ಜವಾಬ್ದಾರಿ ಇಂದು ನೂತನ ಮುಖ್ಯಮಂತ್ರಿಗಳ ಮೇಲಿದೆ.” ಎಂದು ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ವಕೀಲರು ಅನಿಲ್ ಕುಮಾರ್ ಯು ತಿಳಿಸಿದರು.

Related posts

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya
error: Content is protected !!