ಇಂದಬೆಟ್ಟು : ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರುಷಗಳು ತುಂಬಿದ ಈ ಸಂತಸದ ದಿನದಲ್ಲಿ, ಅವರಿಗೆ ಭಗವಂತನು ಉತ್ತಮ ಆರೋಗ್ಯ ಅಪಾರ ಚೈತನ್ಯ ಇನ್ನಷ್ಟು ಮಿಗಿಲಾದ ದೇಶಸೇವೆ ಮಾಡುವ ಶಕ್ತಿಯನ್ನು ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ಸ್ವಾಮಿ ಕರುಣಿಸಲಿ ಎಂದು ಪ್ರಾರ್ಥಿಸಿ, ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ 28, 29,30,31 ವತಿಯಿಂದ ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು, ತಾಲೂಕು ರೈತ ಮೋರ್ಚಾದ ಉಪಾಧ್ಯಕ್ಷ ಪಳನಿ ಸ್ವಾಮಿ ಪಿ.ಆರ್, ಬೂತ್ ಅಧ್ಯಕ್ಷರಾದ ನವೀನ್ ಜೈನ್, ಕಾರ್ಯದರ್ಶಿ ಗಣೇಶ್ ಆಚಾರ್ಯ ಮುಂಡ್ರಬೆಟ್ಟು, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ವಿಜಯ್ ಹೊಡಿಕ್ಕಾರು, ಗಣೇಶ್ ಗೌಡ ಕಲ್ಲಾಜೆ, ರಾಮ ಮೊಯಿಲಿ ಬಂಗಾಡಿ, ತಿಮ್ಮಪ್ಪ ಗೌಡ ಬೆದ್ರಬೆಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.












