26.2 C
ಪುತ್ತೂರು, ಬೆಳ್ತಂಗಡಿ
June 11, 2026
Uncategorized

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 12 ವರ್ಷಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೇಶದ ಅಭಿವೃದ್ಧಿ, ಜನಪರ ಯೋಜನೆಗಳು ಹಾಗೂ ರಾಷ್ಟ್ರದ ಸಮಗ್ರ ಪ್ರಗತಿಗೆ ಕಾರಣವಾದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಸ್ಮರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಅರಸಿನಮಕ್ಕಿ, ಶಕ್ತಿ ಕೇಂದ್ರ ಪ್ರಮುಖ ಜಯಪ್ರಸಾದ್, ಅರ್ಚಕರಾದ ವೃಷಾಂಕ್ ಖಾಡಿಲ್ಕರ್ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮಯ ಬಾರಿಗ ಉಪಸ್ಥಿತರಿದ್ದರು. ಪೂಜೆಯ ಬಳಿಕ ದೇಶದ ಸುಭಿಕ್ಷತೆ, ಅಭಿವೃದ್ಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
error: Content is protected !!