23.9 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ಆಯ್ಕೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮಾದರಿಯಲ್ಲಿ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳು ಮತಪತ್ರಗಳ ಮೂಲಕ ತಮ್ಮ ಶಾಲಾ ನಾಯಕರು ಹಾಗೂ ಮಂತ್ರಿಮಂಡಲದ ಸದಸ್ಯರನ್ನು ಆಯ್ಕೆ ಮಾಡಿದರು.
ಶಾಲಾ ನಾಯಕಿಯಾಗಿ ಸಂಜನಾ ಎಸ್ ಉಪ ನಾಯಕಿಯಾಗಿ ಶ್ರುತಾ ಆಯ್ಕೆಯಾಗಿರುತ್ತಾರೆ.


ಈ ಚುನಾವಣಾ ಪ್ರಕ್ರಿಯೆಯನ್ನು ಶಾಲೆಯ ಮತದಾರರ ಸಾಕ್ಷರತಾ ಸಂಘದ ವತಿಯಿಂದ ಸುಸೂತ್ರವಾಗಿ ನಡೆಸಲಾಯಿತು. ಸಂಘದ ಸಂಯೋಜಕರಾದ ಶ್ರೀಮತಿ ಕಸ್ತೂರಿ ಎಸ್., ಶಿಕ್ಷಕರಾದ ಮುರಳಿ ಪಿ. ಹಾಗೂ ಶ್ರೀಮತಿ ನೀತಾ ಕೆ.ಎಸ್. ಅವರ ನೇತೃತ್ವದಲ್ಲಿ ಮತದಾನ ಮತ್ತು ಮತ ಎಣಿಕೆ ಕಾರ್ಯಗಳು ಯಶಸ್ವಿಯಾಗಿ ನೆರವೇರಿದವು.

ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya
error: Content is protected !!