29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ನಾರಾವಿ : ಪ್ರಧಾನಿಯಾಗಿ ನರೇಂದ್ರ ಮೋದಿಜಿಯವರು ಇದೀಗ 12 ವರ್ಷಗಳನ್ನು ಪೂರೈಸಿ ಭಾರತದ ಇತಿಹಾಸದಲ್ಲಿ ಅತೀ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಎಂಬ ವಿಶಿಷ್ಟ ಗೌರವಕ್ಕೆ ಪಾತ್ರರಾಗಿರುವ ಈ ಸಂದರ್ಭದಲ್ಲಿ ಮೋದಿಜಿಯವರಿಗೆ ಶ್ರೀ ದೇವರು ಉತ್ತಮ ಆಯುರಾರೋಗ್ಯ,ಆಯುಷ್ಯ, ಯಶಸ್ಸು, ಶಕ್ತಿಯನ್ನು ನೀಡಿ ಹರಸಲೆಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿ ಇದರ ವತಿಯಿಂದ ವಿಶೇಷ ಪೂಜೆಯನ್ನು ಸಲ್ಲಿಸಿ ಶ್ರೀ ದೇವರಲ್ಲಿ ಪ್ರಾರ್ಥಿಸಿ ಸಿಹಿಯನ್ನು ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷರು ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ಮಂಡಲ ಕಾರ್ಯದರ್ಶಿ ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಉದಯ ಹೆಗ್ಡೆ, ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಸದಸ್ಯರಾದ ರವೀಶ್ ಕುತ್ಲೂರು, ನಾರಾವಿ ಸಿಎಬ್ಯಾಂಕ್ ಅಧ್ಯಕ್ಷ ಸುಧಾಕರ್ ಭಂಡಾರಿ, ಹಿರಿಯ ಕಾರ್ಯಕರ್ತರಾದ ಚೆಲುವಯ್ಯ ಪೂಜಾರಿ ನಾರಾವಿ, ಡಾಕಯ್ಯ ಪೂಜಾರಿ ಕುತ್ಲೂರು, ರತ್ನಾಕರ ಹೆಗ್ಡೆ ಸಾವ್ಯ, ನಾರಾವಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಬೂತ್ ಸಮಿತಿ ಪ್ರಮುಖರಾದ ರಮೇಶ್ ಹೆಗ್ಡೆ ಕರಿಮಣೇಲು, ಸದಾನಂದ ಬಂಗೇರ,ಭಾಸ್ಕರ ಹೆಗ್ಡೆ ನಾರಾವಿ, ಸುದರ್ಶನ್ ಹೆಗ್ಡೆ ಕುತ್ಲೂರು, ಹರ್ಷ ಪಾರೊಟ್ಟು ಮತ್ತು ನರೇಂದ್ರ ಮೋದಿಜಿಯವರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!