ನಾರಾವಿ : ಪ್ರಧಾನಿಯಾಗಿ ನರೇಂದ್ರ ಮೋದಿಜಿಯವರು ಇದೀಗ 12 ವರ್ಷಗಳನ್ನು ಪೂರೈಸಿ ಭಾರತದ ಇತಿಹಾಸದಲ್ಲಿ ಅತೀ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಎಂಬ ವಿಶಿಷ್ಟ ಗೌರವಕ್ಕೆ ಪಾತ್ರರಾಗಿರುವ ಈ ಸಂದರ್ಭದಲ್ಲಿ ಮೋದಿಜಿಯವರಿಗೆ ಶ್ರೀ ದೇವರು ಉತ್ತಮ ಆಯುರಾರೋಗ್ಯ,ಆಯುಷ್ಯ, ಯಶಸ್ಸು, ಶಕ್ತಿಯನ್ನು ನೀಡಿ ಹರಸಲೆಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿ ಇದರ ವತಿಯಿಂದ ವಿಶೇಷ ಪೂಜೆಯನ್ನು ಸಲ್ಲಿಸಿ ಶ್ರೀ ದೇವರಲ್ಲಿ ಪ್ರಾರ್ಥಿಸಿ ಸಿಹಿಯನ್ನು ಹಂಚಿ ಸಂಭ್ರಮಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷರು ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ಮಂಡಲ ಕಾರ್ಯದರ್ಶಿ ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಉದಯ ಹೆಗ್ಡೆ, ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಸದಸ್ಯರಾದ ರವೀಶ್ ಕುತ್ಲೂರು, ನಾರಾವಿ ಸಿಎಬ್ಯಾಂಕ್ ಅಧ್ಯಕ್ಷ ಸುಧಾಕರ್ ಭಂಡಾರಿ, ಹಿರಿಯ ಕಾರ್ಯಕರ್ತರಾದ ಚೆಲುವಯ್ಯ ಪೂಜಾರಿ ನಾರಾವಿ, ಡಾಕಯ್ಯ ಪೂಜಾರಿ ಕುತ್ಲೂರು, ರತ್ನಾಕರ ಹೆಗ್ಡೆ ಸಾವ್ಯ, ನಾರಾವಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಬೂತ್ ಸಮಿತಿ ಪ್ರಮುಖರಾದ ರಮೇಶ್ ಹೆಗ್ಡೆ ಕರಿಮಣೇಲು, ಸದಾನಂದ ಬಂಗೇರ,ಭಾಸ್ಕರ ಹೆಗ್ಡೆ ನಾರಾವಿ, ಸುದರ್ಶನ್ ಹೆಗ್ಡೆ ಕುತ್ಲೂರು, ಹರ್ಷ ಪಾರೊಟ್ಟು ಮತ್ತು ನರೇಂದ್ರ ಮೋದಿಜಿಯವರ ಅಭಿಮಾನಿಗಳು ಉಪಸ್ಥಿತರಿದ್ದರು.













