30.9 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ CET, NEET, JEE, CA ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಹಾಗೂ ಆ ಪರೀಕ್ಷೆಗಳಿಗೆ ಪರಿಣಾಮಕಾರಿಯಾಗಿ ಸಿದ್ಧರಾಗಲು ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಶೈಕ್ಷಣಿಕ ವರ್ಷದಲ್ಲಿ “ಫೌಂಡೇಶನ್ ಎಡ್ಜ್” ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಜೂ.10 ರಂದು ಅನುಗ್ರಹ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂ| ಫಾ. ಡಾ. ವಿಜಯ್ ಲೋಬೊ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಕುರಿತು ಸಮಗ್ರ ಮಾಹಿತಿಯನ್ನು ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ವಿವೇಕ್ ಭಂಡಾರಿ, ಸಹಾಯಕ ನಿರ್ದೇಶಕರು, ನಿಟ್ಟೆ ವಿಶ್ವವಿದ್ಯಾನಿಲಯ, ಉಪಸ್ಥಿತರಿದ್ದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಫಾ. ಡಾ. ವಿಜಯ್ ಲೋಬೊ ಅವರು “ಫೌಂಡೇಶನ್ ಎಡ್ಜ್” ಕಾರ್ಯಕ್ರಮದ ಮೂಲ ಉದ್ದೇಶಗಳನ್ನು ವಿವರಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸ್ಪಷ್ಟ ಅರಿವು ಮತ್ತು ಸೂಕ್ತ ತಯಾರಿಯನ್ನು ಹೊಂದುವುದು ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.

ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ವಿವೇಕ್ ಭಂಡಾರಿ ಅವರು CET, NEET, JEE ,CA ಮೊದಲಾದ ಪರೀಕ್ಷೆಗಳ ಸ್ವರೂಪ, ಅಧ್ಯಯನ ವಿಧಾನಗಳು, ಸಮಯ ನಿರ್ವಹಣೆ, ಗುರಿ ಸಾಧನೆಗೆ ಅಗತ್ಯವಾದ ತಯಾರಿ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಸಂದೇಹಗಳನ್ನು ಪ್ರಶ್ನೆಗಳ ಮೂಲಕ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮರ್ಪಕ ಹಾಗೂ ಸ್ಪಷ್ಟ ಉತ್ತರಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಮೇರಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಶ್ರೀಮತಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!