ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು ಇದಕ್ಕೆ ಶಾಸಕ ಹರೀಶ್ ಪೂಂಜರು ಸ್ಪಂದನೆ ನೀಡಿದ್ದು ಇಂದು ತಾತ್ಕಾಲಿಕ ರಸ್ತೆಗೆ ಮರು ಜೀವ ಬಂದಂತಾಗಿದೆ.
ರಸ್ತೆ ಕೊಚ್ಚಿ ಹೋದ ಪರಿಣಾಮ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಕಾಲ್ನಡಿಗೆಗೂ ಅಸಾಧ್ಯವಾಗಿದ್ದು ಇಂದು ಹಿಟಾಚಿ ಮೂಲಕ ಮಣ್ಣು ಹಾಕಿ ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಈ ರಸ್ತೆಯಲ್ಲಿ ಮತ್ತೆ ಸಂಚಾರವನ್ನು ಬೆಳೆಸಬಹುದಾಗಿದೆ .ಸಮಸ್ಯೆಗೆ ತ್ವರಿತ ಸ್ಪಂದನೆ ನೀಡಿ ರಸ್ತೆ ಸಂಪರ್ಕ ಒದಗಿಸಿದ ಶಾಸಕ ಹರೀಶ್ ಪೂಂಜರಿಗೆ ಈ ಭಾಗದ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.













