July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಗುರುವಾಯನಕೆರೆ: ನಗರ ಪ್ರದೇಶಗಳಲ್ಲಿ ಉತ್ಕೃಷ್ಟ ದರ್ಜೆಯ ಶಿಕ್ಷಣ ಹೇಗೆ ಸಿಗುತ್ತಿದೆಯೋ ಅದೇ ಮಾದರಿಯಲ್ಲಿ ಎಕ್ಸೆಲ್‌ನಲ್ಲಿ ಕೂಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಭರಿತ ಶಿಕ್ಷಣ ನೀಡಿ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸುವ ಪ್ರಯತ್ನ ನಮ್ಮದು ಎಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.

ಅವರು ಜೂ 10ರಂದು ನಡೆದ ಎಕ್ಸೆಲ್ ವಿದ್ಯಾಸಾಗರ್ ಕ್ಯಾಂಪಸ್‌ನಲ್ಲಿ ಎಕ್ಸೆಲ್ ಟೆಕ್ನೊ ಸ್ಕೂಲ್ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾವುಗಳು ಮಕ್ಕಳಲ್ಲಿ ದೇವರನ್ನು ಕಾಣುತ್ತೇವೆ.ದೇಶದ ಭವಿಷ್ಯ ರೂಪಿಸುವ ಮಕ್ಕಳನ್ನು ಎಕ್ಸೆಲ್ ಮೇಲೆ ನಂಬಿಕೆಯಿಟ್ಟು ಸೇರಿಸಿದ್ದೀರಿ. ನಂಬಿಕೆಗೆ ನ್ಯಾಯ ಕೊಡುವ ಪರಿಪೂರ್ಣ ಕೆಲಸವನ್ನು ನಾವು ಮಾಡುತ್ತೇವೆ.ವಿದ್ಯಾರ್ಥಿಗಳು 360 ಡಿಗ್ರಿ ಸರ್ವತೋಮುಖ ಬೆಳವಣಿಗೆಯತ್ತ ಗಮನಹರಿಸಬೇಕು.ಇದಕ್ಕಾಗಿ ಅಗತ್ಯವಾದ ಬೆಂಬಲವನ್ನು ಸಂಸ್ಥೆಯು ನೀಡುತ್ತದೆ ಎಂದರು..

ಎಕ್ಸೆಲ್ ಟೆಕ್ನೊ ಸ್ಕೂಲ್ ಪ್ರಾಂಶುಪಾಲರಾದ ಸುಮಿತ್ರಾರವರು ಮಾತನಾಡಿ ಪಿಯು ಶಿಕ್ಷಣದಲ್ಲಿ ಎಕ್ಸೆಲ್ ವಿದ್ಯಾರ್ಥಿಗಳು ಅಮೋಘ ಸಾಧನೆಯ ಶಿಖರವೇರಿದ್ದಾರೆ. ಅದೇ ಮಾದರಿಯಲ್ಲಿ ಟೆಕ್ನೋ ಶಾಲೆಯಲ್ಲಿಯೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.ಜೊತೆಗೆ ಜೀವನ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಎಕ್ಸೆಲ್ ನಲ್ಲಿ ನಡೆಯುತ್ತದೆ ಎಂದರು.

ವೇದಿಕೆಯಲ್ಲಿ ಅರಮಲೆಬೆಟ್ಟ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಜ್ವಲ್ ಕಜೆ, ಟೆಕ್ನೋ ಶಾಲೆಯ ಮುಖ್ಯಸ್ಥರಾದ ಸಹನಾ ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಶಿಕ್ಷಕ ಚಂದ್ರಪ್ಪ ಅವರು ನಿರೂಪಿಸಿದರು.ಎಕ್ಸೆಲ್ ಶಿಕ್ಷಕಿಯರಾದ ಲೀನಾ ಫ್ಲೋರಿನಾ ಪಿಂಟೋ, ಪವಿತ್ರಾ ಕೋಟ್ಯಾನ್, ಸ್ವಾತಿ, ಗೀತಾ, ಚೇತನಾ, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya
error: Content is protected !!