29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಗುರುವಾಯನಕೆರೆ: ನಗರ ಪ್ರದೇಶಗಳಲ್ಲಿ ಉತ್ಕೃಷ್ಟ ದರ್ಜೆಯ ಶಿಕ್ಷಣ ಹೇಗೆ ಸಿಗುತ್ತಿದೆಯೋ ಅದೇ ಮಾದರಿಯಲ್ಲಿ ಎಕ್ಸೆಲ್‌ನಲ್ಲಿ ಕೂಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಭರಿತ ಶಿಕ್ಷಣ ನೀಡಿ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸುವ ಪ್ರಯತ್ನ ನಮ್ಮದು ಎಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.

ಅವರು ಜೂ 10ರಂದು ನಡೆದ ಎಕ್ಸೆಲ್ ವಿದ್ಯಾಸಾಗರ್ ಕ್ಯಾಂಪಸ್‌ನಲ್ಲಿ ಎಕ್ಸೆಲ್ ಟೆಕ್ನೊ ಸ್ಕೂಲ್ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾವುಗಳು ಮಕ್ಕಳಲ್ಲಿ ದೇವರನ್ನು ಕಾಣುತ್ತೇವೆ.ದೇಶದ ಭವಿಷ್ಯ ರೂಪಿಸುವ ಮಕ್ಕಳನ್ನು ಎಕ್ಸೆಲ್ ಮೇಲೆ ನಂಬಿಕೆಯಿಟ್ಟು ಸೇರಿಸಿದ್ದೀರಿ. ನಂಬಿಕೆಗೆ ನ್ಯಾಯ ಕೊಡುವ ಪರಿಪೂರ್ಣ ಕೆಲಸವನ್ನು ನಾವು ಮಾಡುತ್ತೇವೆ.ವಿದ್ಯಾರ್ಥಿಗಳು 360 ಡಿಗ್ರಿ ಸರ್ವತೋಮುಖ ಬೆಳವಣಿಗೆಯತ್ತ ಗಮನಹರಿಸಬೇಕು.ಇದಕ್ಕಾಗಿ ಅಗತ್ಯವಾದ ಬೆಂಬಲವನ್ನು ಸಂಸ್ಥೆಯು ನೀಡುತ್ತದೆ ಎಂದರು..

ಎಕ್ಸೆಲ್ ಟೆಕ್ನೊ ಸ್ಕೂಲ್ ಪ್ರಾಂಶುಪಾಲರಾದ ಸುಮಿತ್ರಾರವರು ಮಾತನಾಡಿ ಪಿಯು ಶಿಕ್ಷಣದಲ್ಲಿ ಎಕ್ಸೆಲ್ ವಿದ್ಯಾರ್ಥಿಗಳು ಅಮೋಘ ಸಾಧನೆಯ ಶಿಖರವೇರಿದ್ದಾರೆ. ಅದೇ ಮಾದರಿಯಲ್ಲಿ ಟೆಕ್ನೋ ಶಾಲೆಯಲ್ಲಿಯೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.ಜೊತೆಗೆ ಜೀವನ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಎಕ್ಸೆಲ್ ನಲ್ಲಿ ನಡೆಯುತ್ತದೆ ಎಂದರು.

ವೇದಿಕೆಯಲ್ಲಿ ಅರಮಲೆಬೆಟ್ಟ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಜ್ವಲ್ ಕಜೆ, ಟೆಕ್ನೋ ಶಾಲೆಯ ಮುಖ್ಯಸ್ಥರಾದ ಸಹನಾ ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಶಿಕ್ಷಕ ಚಂದ್ರಪ್ಪ ಅವರು ನಿರೂಪಿಸಿದರು.ಎಕ್ಸೆಲ್ ಶಿಕ್ಷಕಿಯರಾದ ಲೀನಾ ಫ್ಲೋರಿನಾ ಪಿಂಟೋ, ಪವಿತ್ರಾ ಕೋಟ್ಯಾನ್, ಸ್ವಾತಿ, ಗೀತಾ, ಚೇತನಾ, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!