ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಔಷಧಿ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ವಿಭಾಗದ ಮುಖ್ಯಸ್ಥನಾಗಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು. ಈ ಬಗ್ಗೆ ಯಾರಲ್ಲದ್ದರೂ ಹೇಳಿದ್ರೆ ಕೆಲಸದಿಂದ ತೆಗೆಯುವುದಾಗಿ ಪದೆ ಪದೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜೂ.11 ರಂದು BNS-2023(u/s-75(3),79,351(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ













