July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ CET, NEET, JEE, CA ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಹಾಗೂ ಆ ಪರೀಕ್ಷೆಗಳಿಗೆ ಪರಿಣಾಮಕಾರಿಯಾಗಿ ಸಿದ್ಧರಾಗಲು ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಶೈಕ್ಷಣಿಕ ವರ್ಷದಲ್ಲಿ “ಫೌಂಡೇಶನ್ ಎಡ್ಜ್” ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಜೂ.10 ರಂದು ಅನುಗ್ರಹ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂ| ಫಾ. ಡಾ. ವಿಜಯ್ ಲೋಬೊ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಕುರಿತು ಸಮಗ್ರ ಮಾಹಿತಿಯನ್ನು ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ವಿವೇಕ್ ಭಂಡಾರಿ, ಸಹಾಯಕ ನಿರ್ದೇಶಕರು, ನಿಟ್ಟೆ ವಿಶ್ವವಿದ್ಯಾನಿಲಯ, ಉಪಸ್ಥಿತರಿದ್ದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಫಾ. ಡಾ. ವಿಜಯ್ ಲೋಬೊ ಅವರು “ಫೌಂಡೇಶನ್ ಎಡ್ಜ್” ಕಾರ್ಯಕ್ರಮದ ಮೂಲ ಉದ್ದೇಶಗಳನ್ನು ವಿವರಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸ್ಪಷ್ಟ ಅರಿವು ಮತ್ತು ಸೂಕ್ತ ತಯಾರಿಯನ್ನು ಹೊಂದುವುದು ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.

ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ವಿವೇಕ್ ಭಂಡಾರಿ ಅವರು CET, NEET, JEE ,CA ಮೊದಲಾದ ಪರೀಕ್ಷೆಗಳ ಸ್ವರೂಪ, ಅಧ್ಯಯನ ವಿಧಾನಗಳು, ಸಮಯ ನಿರ್ವಹಣೆ, ಗುರಿ ಸಾಧನೆಗೆ ಅಗತ್ಯವಾದ ತಯಾರಿ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಸಂದೇಹಗಳನ್ನು ಪ್ರಶ್ನೆಗಳ ಮೂಲಕ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮರ್ಪಕ ಹಾಗೂ ಸ್ಪಷ್ಟ ಉತ್ತರಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಮೇರಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಶ್ರೀಮತಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು.

Related posts

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!