July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ ಜೂ. 15ರಿಂದ ಜೂ.21 ರವರಗೆ ಪ್ರತಿದಿನ ಸಂಜೆ ಗಂಟೆ 6.೦೦ರಿಂದ 8.೦೦ ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ಡಾ. ವೀಣಾ ಬನ್ನಂಜೆ ಅವರು ಕನ್ನಡದ ಪ್ರಸಿದ್ಧ ಲೇಖಕಿ, ಆಧ್ಯಾತ್ಮಿಕ ಚಿಂತಕಿ, ಮತ್ತು ಪ್ರಭಾವಿ ವಾಗ್ಮಿ, ಉಡುಪಿಯವರಾದ ಇವರು ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಪುತ್ರಿ. ಸಾಹಿತ್ಯ ಮತ್ತು ತತ್ವಶಾಸ್ತçದಲ್ಲಿ ಅಪಾರ ಪಾಂಡಿತ್ಯ ಹೊಂದಿರುವ ಇವರು, ಧಾರ್ಮಿಕ ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದು ಇವರಿಂದ ಪ್ರವಚನ ನಡೆಯಲಿದೆ.

ಪ್ರತಿ ವರ್ಷವೂ ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಂಪೂರ್ಣ ರಾಮಾಯಣ ಪ್ರವಚನವನ್ನು ನಡೆಯುತ್ತಿದ್ದು ನೂರಾರು ಆಸಕ್ತರು ಭಾಗವಹಿಸುತ್ತಿದ್ದರು. ರಾಮಾಯಣ ಕಥಾ ಮಾಲಿಕೆಯನ್ನು ತಿಳಿಸುವ ಉದ್ದೇಶದಿಂದ ಸಂಘಟಕರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya
error: Content is protected !!