July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ನಡ : “ನೀವು ಸಂಪಾದಿಸುವ ವಿದ್ಯೆಯು ಸರ್ವಧನಗಳಲ್ಲಿಯೂ ಅತ್ಯಂತ ಪ್ರಧಾನವಾದದ್ದು. ಇದನ್ನು ಏಕಾಗ್ರತೆಯಿಂದ ನೀವು ಸಾಧಿಸಬೇಕು. ವಿದ್ಯಾರ್ಥಿಯಾದವನು ಸುಖವನ್ನು ತ್ಯಜಿಸಬೇಕು. ನಿರಂತರ ಕ್ರಿಯಾಶೀಲರಾಗಿರಬೇಕು”ಎಂದು ವಿಶ್ರಾಂತ ಪ್ರಾಂಶುಪಾಲರಾದ ಗಣಪತಿ ಭಟ್ ಕುಳಮರ್ವ ಇವರು ನುಡಿದರು.

ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಲಿಲ್ಲಿ ಪಿವಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಕಾಲೇಜಿನ ನೀತಿ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ, ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ, ರಾಜ್ಯಶಾಸ್ತ್ರ ಉಪನ್ಯಾಸಕ ಶಿಲ್ಪಾ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಎಲ್ಲಾ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಷಯವಾರು ಅತ್ಯಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.


ವಿದ್ಯಾರ್ಥಿನಿಯರಾದ ಶಬ್ನಂ ಮತ್ತು ಸ್ಪೂರ್ತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಗಾಯತ್ರಿ ಸ್ವಾಗತಿಸಿ, ಶೇಕ್ ಅದಿಲ್ ವಂದಿಸಿದರು.

Related posts

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!