28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಾಲೆಯ ಸುಮಾರು 35 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಾಲಾ ಬ್ಯಾಗುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳಾದ ಕು|ಜಯಲಕ್ಷ್ಮೀ , ಕೃಷ್ಣಪ್ಪ, ಅಭಿಷೇಕ್ ,ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಕೂಸಪ್ಪ ಗೌಡ, ಸದಸ್ಯರಾದ ಶಿವಪ್ರಸಾದ್ ಕೆ ಮತ್ತು ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.

ಈ ವೇಳೆ ಮಾತನಾಡಿದ ನಿವೃತ್ತ ಮುಖ್ಯ ಶಿಕ್ಷಕ ಜಿ ಮಂಜುನಾಥ ರವರು ಗ್ರಾಮೀಣ ಶಾಲೆಯ ಮಕ್ಕಳಿಗೆ ಗುಣಮಟ್ಟದ ಬ್ಯಾಗುಗಳನ್ನು ನೀಡುವುದರ ಮೂಲಕ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ಇವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವುದರೊಂದಿಗೆ ತಮ್ಮ ಔದಾರ್ಯ ಮತ್ತು ಉಪಕಾರದ ಗುಣವನ್ನು ಸಾಕ್ಷೀಕರಿಸಿದರು ಎಂದರು.

Related posts

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya
error: Content is protected !!