July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು ಇದಕ್ಕೆ ಶಾಸಕ ಹರೀಶ್ ಪೂಂಜರು ಸ್ಪಂದನೆ ನೀಡಿದ್ದು ಇಂದು ತಾತ್ಕಾಲಿಕ ರಸ್ತೆಗೆ ಮರು ಜೀವ ಬಂದಂತಾಗಿದೆ.

ರಸ್ತೆ ಕೊಚ್ಚಿ ಹೋದ ಪರಿಣಾಮ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಕಾಲ್ನಡಿಗೆಗೂ ಅಸಾಧ್ಯವಾಗಿದ್ದು ಇಂದು ಹಿಟಾಚಿ ಮೂಲಕ ಮಣ್ಣು ಹಾಕಿ ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಈ ರಸ್ತೆಯಲ್ಲಿ ಮತ್ತೆ ಸಂಚಾರವನ್ನು ಬೆಳೆಸಬಹುದಾಗಿದೆ .ಸಮಸ್ಯೆಗೆ ತ್ವರಿತ ಸ್ಪಂದನೆ ನೀಡಿ ರಸ್ತೆ ಸಂಪರ್ಕ ಒದಗಿಸಿದ ಶಾಸಕ ಹರೀಶ್ ಪೂಂಜರಿಗೆ ಈ ಭಾಗದ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!