July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಗುರುವಾಯನಕೆರೆ: ನಗರ ಪ್ರದೇಶಗಳಲ್ಲಿ ಉತ್ಕೃಷ್ಟ ದರ್ಜೆಯ ಶಿಕ್ಷಣ ಹೇಗೆ ಸಿಗುತ್ತಿದೆಯೋ ಅದೇ ಮಾದರಿಯಲ್ಲಿ ಎಕ್ಸೆಲ್‌ನಲ್ಲಿ ಕೂಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಭರಿತ ಶಿಕ್ಷಣ ನೀಡಿ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸುವ ಪ್ರಯತ್ನ ನಮ್ಮದು ಎಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.

ಅವರು ಜೂ 10ರಂದು ನಡೆದ ಎಕ್ಸೆಲ್ ವಿದ್ಯಾಸಾಗರ್ ಕ್ಯಾಂಪಸ್‌ನಲ್ಲಿ ಎಕ್ಸೆಲ್ ಟೆಕ್ನೊ ಸ್ಕೂಲ್ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾವುಗಳು ಮಕ್ಕಳಲ್ಲಿ ದೇವರನ್ನು ಕಾಣುತ್ತೇವೆ.ದೇಶದ ಭವಿಷ್ಯ ರೂಪಿಸುವ ಮಕ್ಕಳನ್ನು ಎಕ್ಸೆಲ್ ಮೇಲೆ ನಂಬಿಕೆಯಿಟ್ಟು ಸೇರಿಸಿದ್ದೀರಿ. ನಂಬಿಕೆಗೆ ನ್ಯಾಯ ಕೊಡುವ ಪರಿಪೂರ್ಣ ಕೆಲಸವನ್ನು ನಾವು ಮಾಡುತ್ತೇವೆ.ವಿದ್ಯಾರ್ಥಿಗಳು 360 ಡಿಗ್ರಿ ಸರ್ವತೋಮುಖ ಬೆಳವಣಿಗೆಯತ್ತ ಗಮನಹರಿಸಬೇಕು.ಇದಕ್ಕಾಗಿ ಅಗತ್ಯವಾದ ಬೆಂಬಲವನ್ನು ಸಂಸ್ಥೆಯು ನೀಡುತ್ತದೆ ಎಂದರು..

ಎಕ್ಸೆಲ್ ಟೆಕ್ನೊ ಸ್ಕೂಲ್ ಪ್ರಾಂಶುಪಾಲರಾದ ಸುಮಿತ್ರಾರವರು ಮಾತನಾಡಿ ಪಿಯು ಶಿಕ್ಷಣದಲ್ಲಿ ಎಕ್ಸೆಲ್ ವಿದ್ಯಾರ್ಥಿಗಳು ಅಮೋಘ ಸಾಧನೆಯ ಶಿಖರವೇರಿದ್ದಾರೆ. ಅದೇ ಮಾದರಿಯಲ್ಲಿ ಟೆಕ್ನೋ ಶಾಲೆಯಲ್ಲಿಯೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.ಜೊತೆಗೆ ಜೀವನ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಎಕ್ಸೆಲ್ ನಲ್ಲಿ ನಡೆಯುತ್ತದೆ ಎಂದರು.

ವೇದಿಕೆಯಲ್ಲಿ ಅರಮಲೆಬೆಟ್ಟ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಜ್ವಲ್ ಕಜೆ, ಟೆಕ್ನೋ ಶಾಲೆಯ ಮುಖ್ಯಸ್ಥರಾದ ಸಹನಾ ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಶಿಕ್ಷಕ ಚಂದ್ರಪ್ಪ ಅವರು ನಿರೂಪಿಸಿದರು.ಎಕ್ಸೆಲ್ ಶಿಕ್ಷಕಿಯರಾದ ಲೀನಾ ಫ್ಲೋರಿನಾ ಪಿಂಟೋ, ಪವಿತ್ರಾ ಕೋಟ್ಯಾನ್, ಸ್ವಾತಿ, ಗೀತಾ, ಚೇತನಾ, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya
error: Content is protected !!