26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ ಜೂ. 15ರಿಂದ ಜೂ.21 ರವರಗೆ ಪ್ರತಿದಿನ ಸಂಜೆ ಗಂಟೆ 6.೦೦ರಿಂದ 8.೦೦ ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ಡಾ. ವೀಣಾ ಬನ್ನಂಜೆ ಅವರು ಕನ್ನಡದ ಪ್ರಸಿದ್ಧ ಲೇಖಕಿ, ಆಧ್ಯಾತ್ಮಿಕ ಚಿಂತಕಿ, ಮತ್ತು ಪ್ರಭಾವಿ ವಾಗ್ಮಿ, ಉಡುಪಿಯವರಾದ ಇವರು ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಪುತ್ರಿ. ಸಾಹಿತ್ಯ ಮತ್ತು ತತ್ವಶಾಸ್ತçದಲ್ಲಿ ಅಪಾರ ಪಾಂಡಿತ್ಯ ಹೊಂದಿರುವ ಇವರು, ಧಾರ್ಮಿಕ ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದು ಇವರಿಂದ ಪ್ರವಚನ ನಡೆಯಲಿದೆ.

ಪ್ರತಿ ವರ್ಷವೂ ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಂಪೂರ್ಣ ರಾಮಾಯಣ ಪ್ರವಚನವನ್ನು ನಡೆಯುತ್ತಿದ್ದು ನೂರಾರು ಆಸಕ್ತರು ಭಾಗವಹಿಸುತ್ತಿದ್ದರು. ರಾಮಾಯಣ ಕಥಾ ಮಾಲಿಕೆಯನ್ನು ತಿಳಿಸುವ ಉದ್ದೇಶದಿಂದ ಸಂಘಟಕರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!