29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ನಡ : “ನೀವು ಸಂಪಾದಿಸುವ ವಿದ್ಯೆಯು ಸರ್ವಧನಗಳಲ್ಲಿಯೂ ಅತ್ಯಂತ ಪ್ರಧಾನವಾದದ್ದು. ಇದನ್ನು ಏಕಾಗ್ರತೆಯಿಂದ ನೀವು ಸಾಧಿಸಬೇಕು. ವಿದ್ಯಾರ್ಥಿಯಾದವನು ಸುಖವನ್ನು ತ್ಯಜಿಸಬೇಕು. ನಿರಂತರ ಕ್ರಿಯಾಶೀಲರಾಗಿರಬೇಕು”ಎಂದು ವಿಶ್ರಾಂತ ಪ್ರಾಂಶುಪಾಲರಾದ ಗಣಪತಿ ಭಟ್ ಕುಳಮರ್ವ ಇವರು ನುಡಿದರು.

ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಲಿಲ್ಲಿ ಪಿವಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಕಾಲೇಜಿನ ನೀತಿ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ, ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ, ರಾಜ್ಯಶಾಸ್ತ್ರ ಉಪನ್ಯಾಸಕ ಶಿಲ್ಪಾ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಎಲ್ಲಾ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಷಯವಾರು ಅತ್ಯಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.


ವಿದ್ಯಾರ್ಥಿನಿಯರಾದ ಶಬ್ನಂ ಮತ್ತು ಸ್ಪೂರ್ತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಗಾಯತ್ರಿ ಸ್ವಾಗತಿಸಿ, ಶೇಕ್ ಅದಿಲ್ ವಂದಿಸಿದರು.

Related posts

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya
error: Content is protected !!