July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಾಲೆಯ ಸುಮಾರು 35 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಾಲಾ ಬ್ಯಾಗುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳಾದ ಕು|ಜಯಲಕ್ಷ್ಮೀ , ಕೃಷ್ಣಪ್ಪ, ಅಭಿಷೇಕ್ ,ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಕೂಸಪ್ಪ ಗೌಡ, ಸದಸ್ಯರಾದ ಶಿವಪ್ರಸಾದ್ ಕೆ ಮತ್ತು ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.

ಈ ವೇಳೆ ಮಾತನಾಡಿದ ನಿವೃತ್ತ ಮುಖ್ಯ ಶಿಕ್ಷಕ ಜಿ ಮಂಜುನಾಥ ರವರು ಗ್ರಾಮೀಣ ಶಾಲೆಯ ಮಕ್ಕಳಿಗೆ ಗುಣಮಟ್ಟದ ಬ್ಯಾಗುಗಳನ್ನು ನೀಡುವುದರ ಮೂಲಕ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ಇವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವುದರೊಂದಿಗೆ ತಮ್ಮ ಔದಾರ್ಯ ಮತ್ತು ಉಪಕಾರದ ಗುಣವನ್ನು ಸಾಕ್ಷೀಕರಿಸಿದರು ಎಂದರು.

Related posts

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya
error: Content is protected !!