29.3 C
ಪುತ್ತೂರು, ಬೆಳ್ತಂಗಡಿ
June 11, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ವೇಣೂರು : ಕರಿಮಣೇಲಿನ ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.

ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ವ್ಯವಸ್ಥೆ, ವಸತಿ ಸೌಲಭ್ಯಗಳು ಹಾಗೂ ವಿವಿಧ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಲಾಯಿತು. ಜೊತೆಗೆ ಪೋಷಕರ ಪ್ರಶ್ನೆಗಳಿಗೆ ಉತ್ತರ ನೀಡಿ ಅವರ ಸಂದೇಹಗಳನ್ನು ನಿವಾರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಶರತ್ ಗೋರೆ ಮಾತನಾಡಿ, ಸಂಸ್ಥೆಯು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ ಮತ್ತು ಜಂಟಿ ಪ್ರವೇಶ ಪರೀಕ್ಷೆಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಐದನೇ ತರಗತಿಯಿಂದಲೇ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು. ಇದರಿಂದ ವಿದ್ಯಾರ್ಥಿಗಳು ತಮ್ಮ ಮುಂದಿನ ಶೈಕ್ಷಣಿಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಅಲ್ಲದೆ ಶಾಲೆಯ ವಿವಿಧ ಸೌಲಭ್ಯಗಳು ಹಾಗೂ ಕಾರ್ಯವೈಖರಿಯ ಬಗ್ಗೆ ಪೋಷಕರಿಗೆ ವಿವರಿಸಿದರು.

ಸಂಸ್ಥೆಯ ಕಾರ್ಯದರ್ಶಿ ಶಾಂಭವಿ ಬಿ. ಎನ್. ಮಾತನಾಡಿ, ಸಂಸ್ಥೆಯ ಉದ್ದೇಶಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಕಾರ್ಯಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ನಂತರ ಶಾಲೆಯ ಪ್ರಾಂಶುಪಾಲರಾದ ಶಶಿಧರ್ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಸತಿ ನಿಲಯದ ನಿಯಮಾವಳಿಗಳ ಕುರಿತು ಪೋಷಕರಿಗೆ ವಿವರಿಸಿದರು. ಶಾಲೆಯ ಶೈಕ್ಷಣಿಕ ಮುಖ್ಯಸ್ಥೆ ಜೆಸಿಂಥ ಡಿ ಕುನ್ಹ ವಿದ್ಯಾರ್ಥಿಗಳ ಪರೀಕ್ಷಾ ವಿಧಾನ, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ಶೈಕ್ಷಣಿಕ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕ್ಯಾಂಪಸ್ ಹೆಡ್ ಪ್ರಖ್ಯಾತ್ ಬೆಳುವಾಯಿ ಉಪಸ್ಥಿತರಿದ್ದರು. ಶಿಕ್ಷಕಿ ಶ್ಯಾರನ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಶೈಕ್ಷಣಿಕ ಮುಖ್ಯಸ್ಥೆ ಜೆಸಿಂಥ ಡಿ ಕುನ್ಹ ವಂದನಾರ್ಪಣೆ ಸಲ್ಲಿಸಿದರು.

Related posts

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!