29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವೃತ್ತಿಪರ ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವೀಧರ (ಸ್ವಾಯತ್ತ) ಕಾಲೇಜು, ಉಜಿರೆ ಇದರ ಡೀನ್ ಡಾ. ಸೌಮ್ಯ ಅವರು ಕಾರ್ಯಾಗಾರವನ್ನು ಅಧಿಕೃತವಾಗಿ ಉದ್ಘಾಟಿಸಿ ಮಾತನಾಡಿದರು. ಸಮಯ ಪಾಲನೆ, ಶಿಸ್ತು ಮತ್ತು ಹೊಸತನದ ಮನೋಭಾವ ಸದಾ ಇರಲಿ ಎಂದು ಶಿಬಿರಾರ್ಥಿಗಳಿಗೆ ಅವರು ಆಶಯ ನುಡಿಗಳನ್ನು ಹೇಳಿದರು.

ಅಂತರಾಷ್ಟ್ರೀಯ ಪ್ರಮಾಣೀಕೃತ ಮೇಕಪ್ ಆರ್ಟಿಸ್ಟ್, ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಮೇಕಪ್ ಎಜುಕೇಟರ್ ಆಗಿರುವ ಹಾಸನದ ಸೋಮು ಹಾಸನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತಮ್ಮ ದೀರ್ಘ ವೃತ್ತಿ ಅನುಭವದ ಮಾತುಗಳನ್ನು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.

ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತರಬೇತಿ ಪಡೆದ ನಂತರ ತಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಬ್ಯಾಂಕ್ ಸಾಲದ ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಅತಿಥಿ ಉಪನ್ಯಾಸಕರಾದ ಮಾಧವಿ. ಎಂ. ರೈ ಹಾಗೂ ಆಶಾ ಸೋಮು (ಹಾಸನ) ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಸೋಮು ಹಾಸನ್, ಅವರನ್ನು ಗೌರವಿಸಲಾಯಿತು.

ಕುಮಾರಿ ಜಲಜಾಕ್ಷಿ ಮತ್ತು ಶ್ರಾವಣಿ ತಂಡ ಪ್ರಾರ್ಥನಾ ಹಾಡಿದರು. ರುಡ್‌ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

ಸಂಸ್ಥೆಯ ಸಹೋದ್ಯೋಗಿಗಳಾದ ರಶ್ಮಿ, ಪ್ರವೀಣ್ ‌ಕುಮಾರ್, ಕಾಶ್ಮೀರ ಡಿ ಸೋಜಾ, ಸುರೇಶ, ಸಹಕರಿಸಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya
error: Content is protected !!