26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದ ಘಟನೆ ನಡೆದಿದೆ.

ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ ಭೂಮಿಯ ತೇವಾಂಶ ಹೆಚ್ಚಾಗಿದ್ದು ಇದೇ ಕಾರಣದಿಂದ ಬಂಡೆ ಕುಸಿದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬಂಡೆ ಕುಸಿತ ಸಂಭವಿಸಿದರೂ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಾಹನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲೆನಾಡಿನ ವಿವಿಧ ಭಾಗಗಳಲ್ಲಿ ಆಗಾಗ ಸಾಧಾರಣ ಮಳೆಯಾಗುತ್ತಿದ್ದು, ಘಾಟಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

Related posts

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya
error: Content is protected !!