29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

ಪತ್ರಿಕಾಗೋಷ್ಠಿ

ಬೆಳ್ತಂಗಡಿ : ಬೆಳ್ತಂಗಡಿ ಜನತೆಯ ಹಾಗೂ ವಕೀಲರ ಬಹು ವರ್ಷಗಳ ಬೇಡಿಕೆಯ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಜೂ. 14ರಂದು ಸಚಿವ ಯುಟಿ ಖಾದರ್, ನ್ಯಾಯವಾದಿಗಳು ಹಾಗೂ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನೆರವೇರಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನ್ಯಾಯಾಲಯದ ಕಟ್ಟಡ ಸೋರುತ್ತಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿ ಪ್ರಕಟಿಸಿದ ಕಾರಣದಿಂದಲೇ ಇಂದು ನೂತನ ನ್ಯಾಯಾಲಯದ ಕಟ್ಟಡ ಮಂಜೂರುಗೊಂಡಿದೆ. ಸುಮಾರು 09 ಕೋಟಿ ವೆಚ್ಚದಲ್ಲಿ ಮೊದಲ ಹಂತದ ನೂತನ ನ್ಯಾಯಾಲಯದ ಕಟ್ಟಡದ ಕಾಮಗಾರಿಗೆ ಅನುದಾನ ಮಂಜೂರುಗೊಂಡಿದೆ. ಒಟ್ಟು, 24 ಕೋಟಿ ವೆಚ್ಚದಲ್ಲಿ ನ್ಯಾಯಾಲಯದ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದರು.

ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಈ ನೂತನ ಕಟ್ಟಡಕ್ಕೆ 09 ಕೋಟಿ ಅನುದಾನ ಮಂಜೂರುಗೊಳಿಸಿದ್ದಾರೆ. ಮೊದಲ ಹಂತದ ಕಾಮಗಾರಿಯ ನೂತನ ಕಟ್ಟಡದಲ್ಲಿ ನೆಲಮಹಡಿಯ ಜೊತೆಗೆ ಬೋರ್ ವೆಲ್, ಸೆಪ್ಟಿಕ್ ಟ್ಯಾಂಕ್, ವಾಟರ್ ಸಪ್ಲೈ, ಎಲೆಕ್ಟ್ರಿಕಲ್ ವರ್ಕ್, ಫರ್ನೀಚರ್ ವ್ಯವಸ್ಥೆ ಒಳಗೊಂಡಿರುತ್ತದೆ. ಅಷ್ಟು ಮಾತ್ರವಲ್ಲದೆ, ಆಧುನಿಕ ಸೌಲಭ್ಯಗಳಾದ ಮಳೆಕೊಯ್ಲು, ಸೋಲಾರ್ ವ್ಯವಸ್ಥೆ, ಡಿಜಿಟಲ್ ನ್ಯಾಯಾಲಯದ ವ್ಯವಸ್ಥೆ, ಕೋರ್ಟ್ ಹಾಲ್ ಗಳು, ಮಿನಿ ಕೋರ್ಟ್ ಹಾಲ್, ನ್ಯಾಯಾಧೀಶರ ಕೊಠಡಿ, ಎಜಿಪಿ ಕಚೇರಿ, ಕಂಪ್ಯೂಟರ್ ವ್ಯವಸ್ಥೆ, ಕಕ್ಷಿದಾರರಿಗೆ ವ್ಯವಸ್ಥೆ, ವಿಶೇಷ ಚೇತನರಿಗೆ ಲಾಬಿ, ಪ್ರತ್ಯೇಕ ಶೌಚಾಲಯದ ವ್ಯವಸ್ಥೆ, ಸುಸಜ್ಜಿತ ರೆಕಾರ್ಡ್ ರೂಂ’ಗಳ ಸೌಲಭ್ಯಗಳಿರುತ್ತವೆ. ಎರಡನೇ ಹಂತದ ಕಾಮಗಾರಿಯಲ್ಲೂ ಕೂಡಾ ಸಾಕಷ್ಟು ಸೌಲಭ್ಯಗಳು ಇರಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ, ತಾಲೂಕು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲೂಕು ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾಲಾಡಿ, ಗ್ಯಾರಂಟಿ ಸಮಿತಿ ಸದಸ್ಯರಾದ ನೇಮಿರಾಜು, ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾಫಿ, ಜಗದೀಶ್ ಡಿ. ಮತ್ತಿತ್ತರರು ಉಪಸ್ಥಿತರಿದ್ದರು.

Related posts

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
error: Content is protected !!