25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

ಧರ್ಮಸ್ಥಳ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯಿತಿ ಬೆಳ್ತಂಗಡಿ, ಮಹಾತ್ಮ ಗಾಂಧಿ ಧರ್ಮಸ್ಥಳ ಗ್ರಾಮ ಪಂಚಾಯತು, ಸ್ವಚ್ಛ ಭಾರತ್ ಮಿಷನ್ ದಕ್ಷಿಣ ಕನ್ನಡ, ಮಾನ್ವಿ ಶ್ರೀ ಸಂಜೀವಿನಿ ಒಕ್ಕೂಟ ಧರ್ಮಸ್ಥಳ, ಇವರ ಸಹಯೋಗದಲ್ಲಿ ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತಿ ಆಡಳಿತ ಅಧಿಕಾರಿ ಮಹಾವೀರ ಸೇಬಣ್ಣನವರ ಅಧ್ಯಕ್ಷತೆಯಲ್ಲಿ ನಡೆಯಿತು

ಕಾರ್ಯಗಾರವನ್ನು ತಾಲೂಕು ಪಂಚಾಯತ್ ಬೆಳ್ತಂಗಡಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ರವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆಯನ್ನು ಮಾಡಿದರು. ತ್ಯಾಜ್ಯ ನಿರ್ವಹಣೆ ಸಂಪನ್ಮೂಲ ಕ್ರೂಡೀಕರಣ, ಯಾವ ರೀತಿ ತ್ಯಾಜ್ಯ ನಿರ್ವಹಣೆ ಮತ್ತು ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಮಗ್ರವಾದ ಮಾರ್ಗದರ್ಶನವನ್ನು ನೀಡಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಸ್ವಾಗತ ಹಾಗೂ ಪ್ರಸ್ತಾವನೆಯ ಮೂಲಕ ಮಾತಾಡಿ ಮೂಲದಿಂದಲೇ ತ್ಯಾಜ್ಯ ನಿರ್ವಹಣೆ, ತ್ಯಾಜ್ಯ ಸಂಗ್ರಹಣೆಯ ವೇಳಾಪಟ್ಟಿ, ತ್ಯಾಜ್ಯ ನಿರ್ವಹಣೆಯ ಬಗ್ಗೆ ಶುಲ್ಕ ವಿಧಿಸುವ ಬಗ್ಗೆ , ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಪರಿಣಾಮಕಾರಿ ಅನುಷ್ಠಾನವಾಗುವ ಬಗ್ಗೆ ತಿಳಿಸಿದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಸ್ NGO ಸಂಸ್ಥೆಸಂಯೋಜಕರು ಅನಂತ ದೇಶ ಭಂಡಾರಿ, ಸಾಹಸ್ NGO ಸಂಸ್ಥೆಯ ಮೇಲ್ವಿಚಾರಕರು ಗಣೇಶ್ ಕೆ ಆರ್., ಮಂಗಳೂರು ಜಿಲ್ಲಾ ಪಂಚಾಯತ್ ಜಿಲ್ಲಾ ಸ್ವಚ್ಛತಾ ಸಮಾಲೋಚಕರು ಡೊಂಬಯ್ಯ ಇವರು ಗ್ರಾಮದ ಸ್ವಚ್ಛತೆ, ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ನಿರಂತರತೆಯ ಸುಸ್ಥಿರತೆಯನ್ನು ಕಾಪಾಡುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಮಹಾವೀರಸೇಬಣ್ಣನವರು ಮಾತನಾಡಿ ಗ್ರಾಮದ ಅಭಿವೃದ್ಧಿಯ ಜೊತೆಗೆ ಗ್ರಾಮದ ಸ್ವಚ್ಛತೆ, ಏಕ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸಾರ್ವಜನಿಕರು, ಅಂಗಡಿ ಹೋಟೆಲ್ ಮಾಲಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಹಕರಿಸುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು, ಸಂಘ ಸಂಸ್ಥೆ ಪ್ರತಿನಿಧಿಗಳು, ಅಂಗಡಿ, ಹೋಟೆಲ್ ಮಾಲಕರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೀಳಾ ಧನ್ಯವಾದ ಸಲ್ಲಿಸಿದರು, ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!