24.8 C
ಪುತ್ತೂರು, ಬೆಳ್ತಂಗಡಿ
June 12, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಸಲಾಯಿತು.

ಬಂಟರ ಸಂಘ ಉಜಿರೆ ವಲಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಪವಿತ್ರ ಸುಕುಮಾರ್ ಶೆಟ್ಟಿ ಮತ್ತು ವಿಜಯಕುಮಾರ್ ರೈ ,ಕಾರ್ಯದರ್ಶಿಯಾಗಿ ಅಜಿತ್ ಶೆಟ್ಟಿ ಕುಂಜರ್ಪ, ಕೋಶಾಧಿಕಾರಿಯಾಗಿ ಸಂತೋಷಕುಮಾರ್ ಶೆಟ್ಟಿ ,ಉಜಿರೆ ಗ್ರಾಮ ಸಮಿತಿ ಅಧ್ಯಕ್ಷರಾಗಿ ಚಿತ್ರೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ 14 ರಂದು ಅಪರಾಹ್ನ 3ಕ್ಕೆ ಉಜಿರೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ. ನಿವೃತ್ತ ಪ್ರಾಂಶುಪಾಲ ಡಾ| ಬಿ ಎ ಕುಮಾರ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಪ್ರಕಾಶ್ ಶೆಟ್ಟಿ ನೊಚ್ಚ ಮತ್ತು ಉಮೇಶ್ ಶೆಟ್ಟಿ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಿದ್ದಾರೆ.

Related posts

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!