July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನವಿಕಾಸ ಸಂಯೋಜಕಿಯರ ಕ್ರಿಯಾ ಯೋಜನಾ ಸಭೆ ನಡೆಡಯಿತು.

ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ದೀಪ ಬೆಳಗಿಸಿ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಯೋಜನೆಯ ಕಾರ್ಯಕ್ರಮದ ಅನುಷ್ಠಾನ ಹಾಗೂ ತಾಲೂಕಿನಲ್ಲಿ ಜ್ಞಾನ ವಿಕಾಸ ಕೇಂದ್ರವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಗೊಳಿಸುವಲ್ಲಿ ಮಾಹಿತಿ ನೀಡಿದರು. ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ ಸಭೆಯಲ್ಲಿ ಮೊದಲಾಗಿ ಎಲ್ಲಾ ಸೇವಾ ಪ್ರತಿನಿಧಿ ಅವರ ಪರಿಚಯ ಮಾಡಿಕೊಂಡು ಜ್ಞಾನ ವಿಕಾಸದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜ್ಞಾನ ವಿಕಾಸ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ರವರು ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಯೋಜನಾಧಿಕಾರಿ ಸೇವಾ ಪ್ರತಿನಿಧಿಯವರು ಜ್ಞಾನವಿಕಾಸದಲ್ಲಿ ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ಮನೆ ಭೇಟಿ ಮಾಡಿ ಹಾಜರಾತಿ ಸಮಸ್ಯೆ ಸರಿಪಡಿಸುವ ಕುರಿತು, ಹೊಸಕೇಂದ್ರ ರಚನೆಯ ಕುರಿತು ಮಾಹಿತಿ ನೀಡಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು. ಸೇವಾಪ್ರತಿನಿಧಿಗಳು ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಯೋಜನಾಧಿಕಾರಿ ಯಶೋಧರ ಹಾಗೂ ಹರೀಶ್ ಜ್ಞಾನವಿಕಾಸದ ಸಮನ್ವಯಾಧಿಕಾರಿ, ಮಧುರಾ ವಸಂತ್, ರವಿಕಲಾ ಹಾಗೂ ಕೇಂದ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya
error: Content is protected !!