ಬೆಳ್ತಂಗಡಿ: ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂನ್ 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ಧರ್ಮಸ್ಥಳದಲ್ಲಿ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಭೇಟಿ ಮಾಡಿ ಆಹ್ವಾನ ಪತ್ರ ನೀಡಿ ಆಶೀರ್ವಾದ ಪಡಕೊಳ್ಳಲಾಯಿತು.
ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ, ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಅಪರ ಸರ್ಕಾರಿ ವಕೀಲ, ಕಟ್ಟಡ ಸಮಿತಿ ಸದಸ್ಯ ಮನೋಹರ ಕುಮಾರ್ ಮತ್ತು ಸಂಘದ ಜತೆ ಕಾರ್ಯದರ್ಶಿ ಹರ್ಷಿತ್ ಹೆಚ್ ಇದ್ದರು.













