July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಸಪ್ತಾಹದ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜ್ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸಸ್ ಧರ್ಮಸ್ಥಳ ಇಲ್ಲಿನ ವೈದ್ಯಾಧಿಕಾರಿಗಳಾಗಿರುವ ಡಾ. ಬಿಂದುಶ್ರೀ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ಯೋಗದ ಇತಿಹಾಸ ಪ್ರಸ್ತುತ ದಿನಗಳಲ್ಲಿ ಯೋಗ ಯಾವ ರೀತಿ ಕೆಲಸ ಮಾಡುತ್ತಿದೆ ಮಾನಸಿಕ ನೆಮ್ಮದಿಗೆ ಯೋಗ ಹಾಗೂ ಆಸನಗಳ ಮಹತ್ವ ಇತ್ಯಾದಿಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಕ್ಲಿನಿಕಲ್ ಯೋಗದಲ್ಲಿ ಎಂ.ಡಿ ಅಂತಿಮ ವರ್ಷದ ವಿದ್ಯಾರ್ಥಿನಿ ಡಾ. ಅಕ್ಷತಾ, ಯು.ಜಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕು. ಅಕ್ಷಯಾ, ಹಾಗೂ ವಸಂತಕುಮಾರ್ ಉಪಸ್ಥಿತರಿದ್ದು ಸಹಕರಿಸಿದರು. ಶಾಲಾ ಮುಖೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿ ಬಂದ ಈ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಕಾವ್ಯ ರಚನಾ ಕಮ್ಮಟಕ್ಕೆ ಚಾಲನೆ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya
error: Content is protected !!