26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

ಬೆಳ್ತಂಗಡಿ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯ ನೇತ್ರಾವತಿ ಪೀಕ್ ಸೇರಿದಂತೆ ನಾನಾ ಚಾರಣ ತಾಣಗಳಿಗೆ ಜೂನ್ 1ರಿಂದ ಪ್ರವೇಶಕ್ಕೆ ಅನುಮತಿ ನೀಡಿದ್ದರೂ, ಇದೀಗ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯಿಂದ ಹೊಸ ಬುಕ್ಕಿಂಗ್‌ ಗಳು ಸ್ಥಗಿತಗೊಂಡಿದೆ.

ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಚಾರಣದ ವೇಳೆ ಸಂಭವಿಸಿದ್ದ ದುರಂತಗಳ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಚಾರಣ ಆರಂಭಕ್ಕೂ ಸುರಕ್ಷತಾ ಕ್ರಮಗಳ ಕುರಿತು ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದರು. ಆದರೆ ರಾಜ್ಯದ ಕೆಲವು ಚಾರಣ ತಾಣಗಳಲ್ಲಿ ಸುತ್ತೋಲೆಯ ನಿಯಮಗಳು ಸಂಪೂರ್ಣ ಪಾಲನೆಯಾಗದಿರುವ ಹಿನ್ನೆಲೆಯಲ್ಲಿ ಐಸಿಟಿ ವಿಭಾಗವು ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರಸ್ತುತ ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿಕೊಂಡಿರುವ ಚಾರಣಿಗರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

Related posts

ಅಳದಂಗಡಿ ವಿಠಲದಾಸ್ ನಿಧನ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya
error: Content is protected !!