26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

ಬೆಳ್ತಂಗಡಿ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯ ನೇತ್ರಾವತಿ ಪೀಕ್ ಸೇರಿದಂತೆ ನಾನಾ ಚಾರಣ ತಾಣಗಳಿಗೆ ಜೂನ್ 1ರಿಂದ ಪ್ರವೇಶಕ್ಕೆ ಅನುಮತಿ ನೀಡಿದ್ದರೂ, ಇದೀಗ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯಿಂದ ಹೊಸ ಬುಕ್ಕಿಂಗ್‌ ಗಳು ಸ್ಥಗಿತಗೊಂಡಿದೆ.

ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಚಾರಣದ ವೇಳೆ ಸಂಭವಿಸಿದ್ದ ದುರಂತಗಳ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಚಾರಣ ಆರಂಭಕ್ಕೂ ಸುರಕ್ಷತಾ ಕ್ರಮಗಳ ಕುರಿತು ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದರು. ಆದರೆ ರಾಜ್ಯದ ಕೆಲವು ಚಾರಣ ತಾಣಗಳಲ್ಲಿ ಸುತ್ತೋಲೆಯ ನಿಯಮಗಳು ಸಂಪೂರ್ಣ ಪಾಲನೆಯಾಗದಿರುವ ಹಿನ್ನೆಲೆಯಲ್ಲಿ ಐಸಿಟಿ ವಿಭಾಗವು ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರಸ್ತುತ ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿಕೊಂಡಿರುವ ಚಾರಣಿಗರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

Related posts

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya
error: Content is protected !!