29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ. ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಸ್ತ್ರೀರೋಗ ತಪಾಸಣಾ ಶಿಬಿರ ನಡೆಯಲಿದೆ.

ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಗರ್ಭಕಂಠ ಮತ್ತು ಗರ್ಭಾಶಯದ ಕ್ಯಾನ್ಸರ್ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಸ್ತನದ ಕ್ಯಾನ್ಸರ್, ಮೂತ್ರನಾಳದ ಸೋಂಕು ತಪಾಸಣೆಗಳನ್ನು ನಡೆಸಲಾಗುವುದು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ, ಡಾ| ಪ್ರಿಯಾಂಕ ಜಯದೇವ್ ಇವರು ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ಉಚಿತ ತಪಾಸಣೆಯೊಂದಿಗೆ, ಉಚಿತ ಪ್ಯಾಪ್ ಸ್ಮಯರ್ ಪರೀಕ್ಷೆ, ಲ್ಯಾಬ್ ಪರೀಕ್ಷೆಗಳಲ್ಲಿ 25%, ರೇಡಿಯಾಲಜಿ ಸೇವೆಗಳಲ್ಲಿ 25%, ಪ್ರಕ್ರಿಯೆಗಳಲ್ಲಿ 25%, ಔಷಧಿಗಳ ಮೇಲೆ 10%, ಒಳರೋಗಿ ಶುಲ್ಕಗಳಲ್ಲಿ 10%, ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ 25% ರಿಯಾಯತಿ ದೊರೆಯಲಿದೆ.

ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya
error: Content is protected !!