29 C
ಪುತ್ತೂರು, ಬೆಳ್ತಂಗಡಿ
June 12, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಸಲಾಯಿತು.

ಬಂಟರ ಸಂಘ ಉಜಿರೆ ವಲಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಪವಿತ್ರ ಸುಕುಮಾರ್ ಶೆಟ್ಟಿ ಮತ್ತು ವಿಜಯಕುಮಾರ್ ರೈ ,ಕಾರ್ಯದರ್ಶಿಯಾಗಿ ಅಜಿತ್ ಶೆಟ್ಟಿ ಕುಂಜರ್ಪ, ಕೋಶಾಧಿಕಾರಿಯಾಗಿ ಸಂತೋಷಕುಮಾರ್ ಶೆಟ್ಟಿ ,ಉಜಿರೆ ಗ್ರಾಮ ಸಮಿತಿ ಅಧ್ಯಕ್ಷರಾಗಿ ಚಿತ್ರೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ 14 ರಂದು ಅಪರಾಹ್ನ 3ಕ್ಕೆ ಉಜಿರೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ. ನಿವೃತ್ತ ಪ್ರಾಂಶುಪಾಲ ಡಾ| ಬಿ ಎ ಕುಮಾರ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಪ್ರಕಾಶ್ ಶೆಟ್ಟಿ ನೊಚ್ಚ ಮತ್ತು ಉಮೇಶ್ ಶೆಟ್ಟಿ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಿದ್ದಾರೆ.

Related posts

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!