ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಸಲಾಯಿತು.
ಬಂಟರ ಸಂಘ ಉಜಿರೆ ವಲಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಪವಿತ್ರ ಸುಕುಮಾರ್ ಶೆಟ್ಟಿ ಮತ್ತು ವಿಜಯಕುಮಾರ್ ರೈ ,ಕಾರ್ಯದರ್ಶಿಯಾಗಿ ಅಜಿತ್ ಶೆಟ್ಟಿ ಕುಂಜರ್ಪ, ಕೋಶಾಧಿಕಾರಿಯಾಗಿ ಸಂತೋಷಕುಮಾರ್ ಶೆಟ್ಟಿ ,ಉಜಿರೆ ಗ್ರಾಮ ಸಮಿತಿ ಅಧ್ಯಕ್ಷರಾಗಿ ಚಿತ್ರೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಆಯ್ಕೆಯಾದರು.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ 14 ರಂದು ಅಪರಾಹ್ನ 3ಕ್ಕೆ ಉಜಿರೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ. ನಿವೃತ್ತ ಪ್ರಾಂಶುಪಾಲ ಡಾ| ಬಿ ಎ ಕುಮಾರ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಪ್ರಕಾಶ್ ಶೆಟ್ಟಿ ನೊಚ್ಚ ಮತ್ತು ಉಮೇಶ್ ಶೆಟ್ಟಿ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಿದ್ದಾರೆ.













